ಬೈಕ್ ಮೇಲೆ ಸಾಗುತ್ತಿದ್ದಾಗ ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಬ್ಯಾಂಕ್ ವ್ಯವಸ್ಥಾಪಕರೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಕರಬುರಗಿಯಲ್ಲಿ ಸೋಮವಾರ ನಡೆದಿದೆ. ಮೃತ ವಿಜಯ್ ಕುಮಾರ್ ಕುಲಕರ್ಣಿ (59) ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ನಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು ಮಹಾತ್ಮ ಬಸವೇಶ್ವರ ಕಾಲನಿ ನಿವಾಸಿಯಾಗಿದ್ದರು.