ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಚಾಲಕನ ಬರ್ಬರ ಹತ್ಯೆ!

ಶುಕ್ರವಾರ, 12 ಮೇ 2023 (18:27 IST)
ಕಲಬುರಗಿ : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಚಾಲಕನ ಬರ್ಬರ ಹತ್ಯೆಗೈದ ಘಟನೆ ಕಲಬುರಗಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಡಿಪೋ ನಂಬರ್ 3ರ ಚಾಲಕ ನಾಗಯ್ಯ ಸ್ವಾಮಿ (45) ಹತ್ಯೆಯಾದ ವ್ಯಕ್ತಿ. ಬಸ್ ನಿಲ್ದಾಣದಲ್ಲಿ ಬಸ್ ತಂದು ನಿಲ್ಲಿಸಿದ ವೇಳೆ ಘಟನೆ ನಡೆದಿದ್ದು, 3 ಜನ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ನೂರಾರು ಜನರ ಮುಂದೆಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಹಳೇ ವೈಷಮ್ಯ ಹಿನ್ನೆಲೆ ಈ ಕೃತ್ಯ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ