ಬಸವರಾಜ ರಾಯರೆಡ್ಡಿ ಅತ್ಯಂತ ಕ್ರಿಯಾಶೀಲ ಸಚಿವ: ಸಿಎಂ ಶ್ಲಾಘನೆ

ಶುಕ್ರವಾರ, 22 ಸೆಪ್ಟಂಬರ್ 2017 (15:38 IST)
ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಸವರಾಜ ರಾಯರೆಡ್ಡಿ ಅತ್ಯಂತ ಕ್ರಿಯಾಶೀಲ ಸಚಿವರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸರಕಾರದ ಜನಪರ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಕೊಪ್ಪಳದ ಇತಿಹಾಸದಲ್ಲಿಯೇ ಇದೊಂದು ಬೃಹತ್ ಸಮಾವೇಶ. 1500 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಜಿಲ್ಲೆಯಲ್ಲಿ ಪ್ರತಿಯೊಂದು ಫಲಾನುಭವಿಗಳ ಮನೆ ಮನೆಗಳಿಗೆ ಸರಕಾರದ ಯೋಜನೆಗಳು ದೊರೆತಿವೆ. ಸಚಿವ ರಾಯರೆಡ್ಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಕುಷ್ಟಗಿ ಮತ್ತು ಯಲಬುರ್ಗಾ ಕ್ಷೇತ್ರಗಳಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಸರಕಾರ ಜನಪರ ಸರಕಾರವಾಗಿದೆ ಎನ್ನುವುದಕ್ಕೆ ಸರಕಾರಿ ಯೋಜನೆಗಳೇ ಸಾಕ್ಷಿಯಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ