ನಾದಿನಿ ಮೇಲೆ ಬಾವನ ಕಣ್ಣು !?

ಸೋಮವಾರ, 24 ಜನವರಿ 2022 (09:58 IST)
ಬೆಂಗಳೂರು : ಮದುವೆ ಆಗುವಂತೆ ಒತ್ತಾಯಿಸಿದ್ದ ಬಾವನಿಂದಲೇ ನಾದಿನಿ ಅಪಹರಣವಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
 
ದೇವರಾಜ್, ನವೀನ್, ಕುಮಾರ್ ಬಂಧಿತ ಆರೋಪಿಗಳು. ಬೆಂಗಳೂರಿನ ಕೊಡುಗೆಹಳ್ಳಿಯಲ್ಲಿ ಈ ಘಟನೆ ನಡೆದಿದೆ. ದೇವರಾಜ್ ಅಪಹರಿಸಿದ ಮಹಿಳೆಯ ಅಕ್ಕನನ್ನು ಮದುವೆಯಾಗಿದ್ದ. ನಂತರ ತಂಗಿಯನ್ನು ಪ್ರೀತಿಸಿ ಮದುವೆ ಆಗುವಂತೆ ಒತ್ತಾಯಿಸಿದ್ದ. ಆದರೆ ನಾದಿನಿಯು ಬಾವನ ಪ್ರೀತಿಯನ್ನು ನಿರಾಕರಿಸಿದ್ದಳು.

ಇದರಿಂದ ಕುಪಿತಗೊಂಡ ದೇವರಾಜ್ ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ. ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ