ಬಿಬಿಎಂಪಿ ಮೈತ್ರಿ: ಸಿಎಂ ಸಿದ್ದರಾಮಯ್ಯ ಜತೆ ಜಮೀರ್ ಅಹ್ಮದ್ ಚರ್ಚೆ

ಶುಕ್ರವಾರ, 28 ಆಗಸ್ಟ್ 2015 (15:14 IST)
ಬಿಬಿಎಂಪಿ ಚುನಾವಣೆ ಮೈತ್ರಿ ಕುರಿತಂತೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಜಮೀರ್ ಅಹ್ಮದ್ ಮಾತುಕತೆ ನಡೆಸಿದ್ದಾರೆ. ಜಮೀರ್‌ಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
 
ಹೈಕಮಂಡ್ ಜೊತೆ ಚರ್ಚಿಸಿ ಅಂತಿಮ ನಿರ್ದಾರ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಜೆಡಿಎಸ್ ಶಾಸಕ ಜಮೀರ್‌ಗೆ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ.
 
ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ 76 ಸ್ಥಾನಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿತ್ತು,ಜೆಡಿಎಸ್ 14 ಸ್ಥಾನಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿತ್ತು. 

ವೆಬ್ದುನಿಯಾವನ್ನು ಓದಿ