ಅನುಮಾನಾಸ್ಪದವಾಗಿ ಬಿಬಿಎಂಪಿ ರೆವಿನ್ಯೂ ಇನ್ಸ್‌ಪೆಕ್ಟರ್ ಸಾವು!

ಮಂಗಳವಾರ, 17 ಜನವರಿ 2017 (11:35 IST)
ಬಿಬಿಎಂಪಿ ರೆವಿನ್ಯೂ ಇನ್ಸ್‌ಪೆಕ್ಟರೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರಿನ ಶ್ರೀನಗರದಲ್ಲಿ ನಡೆದಿದೆ. 
ಶ್ರೀನಿವಾಸ್ ಅನುಮಾನಾಸ್ಪದವಾಗಿ ಸಾವಿಗೀಡಾದ ಕಂದಾಯ ನಿರೀಕ್ಷಕ. ನಿನ್ನೆ ಸಂಜೆ ಐದು ಗಂಟೆ ಸುಮಾರಿಗೆ ಶ್ರೀನಗರದಲ್ಲಿ ತಾವು ವಾಸವಿದ್ದ ಮನೆಯಲ್ಲಿ ಅನುಮಾನಸ್ಪಾದವಾಗಿ ಸಾವಿಗೀಡಾಗಿದ್ದಾರೆ. ವರ್ಗಾವಣೆಯಿಂದ ಬೇಸತ್ತು ಶ್ರೀನಿವಾಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 
 
ಹೃದಯಾಘಾತದಿಂದ ಶ್ರೀನಿವಾಸ್ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ