ಮಳೆಯಲ್ಲೂ ಬಿ ಡಿ ಎ ಕಾರ್ಯಾಚರಣೆ

ಗುರುವಾರ, 11 ನವೆಂಬರ್ 2021 (20:00 IST)
ಜೆಪಿ ನಗರ ಬಡಾವಣೆಯ ಆಲಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಸರ್ವೆ ಸಂಖ್ಯೆ 5/7, 6/1, 6/4, 6/5, 7/2, 3, 4 ಮತ್ತು 8 ರ 4 ಎಕರೆ 20 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್ ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎಗೆ ಸೇರಿದ ಹಲವಾರು ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಆಸ್ತಿಗಳನ್ನು ಮರು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಒಂದು ತಿಂಗಳಿಂದ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ. ಹಲವಾರು ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಆಸ್ತಿಗಳನ್ನು ಒತ್ತುವರಿ ಅಥವಾ ಭೂಕಬಳಿಕೆದಾರರು ಕಬಳಿಕೆ ಮಾಡಿದ್ದಾರೆ. ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಆಸ್ತಿಯನ್ನು ಮರು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ