ಬಳ್ಳಾರಿ ಜಿಲ್ಲೆ ಕೂಡ ಕೈಗಾರಿಕೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ಗಣಿ, ಸ್ಟೀಲ್, ರೆಡಿಮೆಡ್ ಬಟ್ಟೆ, ಜಿನ್ಸ್ ಉದ್ಯಮ ಮತ್ತು ಇತರೆ ವಲಯಗಳಲ್ಲಿ ಹೆಸರುವಾಸಿಯಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆಗಳ ಬೆಳವಣಿಗೆ ಹಾಗೂ ಕಾರ್ಖಾನೆಗಳ ಸ್ಥಾಪನೆಗೆ ಅಗತ್ಯವಾದ ಎಲ್ಲ ಸಹಾಯವನ್ನು ರಾಜ್ಯ ಸರಕಾರ ನೀಡಲಿದೆ ಎಂದು ಹೇಳಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಉದ್ಯಮಿದಾರರು ವಿದ್ಯುತ್ ಸಮಸ್ಯೆ ಸೇರಿದಂತೆ ರಸ್ತೆ, ಕುಡಿಯುವ ನೀರು, ಪರವಾನಿಗೆ ನೀಡುವಲ್ಲಿ ವಿಳಂಬ ನೀತಿ ಎಂಬ ಆಕ್ಷೇಪಗಳನ್ನು ಪ್ರಸ್ತಾಪಿಸಿದ್ದು, ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವ ಬಳಿ ಮನವಿ ಮಾಡಿಕೊಂಡರು.