ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ

ಬುಧವಾರ, 27 ಸೆಪ್ಟಂಬರ್ 2023 (18:20 IST)
ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಂದ್ ಶಾಂತಿಯುತವಾಗಿ ಆಚರಿಸಲಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನೀರು ಬಿಡ್ತಿದೆ. ಸರ್ಕಾರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿದೆ. ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದರು. ತಮಿಳುನಾಡಿಗೆ 32 ಟಿಎಂಸಿ ಅಡಿ ನೀರು ಮಾತ್ರ 1.8 ಲಕ್ಷ ಹೆಕ್ಟೇರ್ ಬೆಳೆಗೆ ಹಂಚಿಕೆ ಆಗಿರೋದು. ಆದರೆ ಅವರು 4 ಲಕ್ಷ ಹೆಕ್ಟೇರ್ ಕುರುವೈ ಬೆಳೆ ಬೆಳೆದಿದ್ದಾರೆ. ಈಗಾಗಲೇ ಅಧಿಕ ನೀರು ಹರಿದು ಹೋಗಿದೆ. ಇದನ್ನು ನಮ್ಮವರು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕಡಿಮೆ ಮಳೆ ಆಗಿದೆ. ಬಿದ್ದ ಮಳೆ ಎಲ್ಲಕೆ ಆರೆಸ್ ಜಲಾಶಯಕ್ಕೇ ಹರಿದು ಬರಲ್ಲ ಎಂದು ಹೇಳಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ