ರೈತ ಸಂಘಟನೆಗಳಿಂದ ಭಾರತ್ ಬಂದ್- ವಿವಿ ಎಕ್ಸಾಂ ಮುಂದೂಡಿಕೆ

ಸೋಮವಾರ, 27 ಸೆಪ್ಟಂಬರ್ 2021 (20:09 IST)
ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದೂಡಿ ವಿಶ್ವವಿದ್ಯಾಲಯದ ಆದೇಶವನ್ನು ಪ್ರಕಟಿಸಿದೆ.ಬೆಂಗಳೂರು ನಗರ ವಿವಿ ಸ್ನಾತಕ (ಯುಜಿ). ಸ್ನಾತಕೋತ್ತರ (ಪಿ.ಜಿ) ಮತ್ತು ಬಿಎಡ್ ಪದವಿ ಪರೀಕ್ಷೆಗಳು ನಡೆಯಬೇಕಾಗಿತ್ತು. ಆದ್ರೆ ಮುಂಬರುವ ಭಾರತ ಬಂದ್ ಪರೀಕ್ಷೆಗೆ ಹಾಜರಾಗಲು ಸಮಸ್ಯೆಯಾಗಬಾರದು ಅನ್ನೋ ಕಾರಣಕ್ಕೆ ಮುಂದಿನ ಆದೇಶವನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ವಿವಿ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ರಮೇಶ್ ಬಿ. ಅವರಿಗೆ ಆದೇಶ ಹೊರಡಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ