ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ-ಎಸ್.ಎಂ.ಕೃಷ್ಣ ಒತ್ತಾಯ

ಶನಿವಾರ, 20 ಜನವರಿ 2018 (15:47 IST)
ಮಂಡ್ಯ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ 'ಭಾರತ ರತ್ನ' ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಲಕ್ಷಾಂತರ ಜನರು ಶಿವಕುಮಾರ ಸ್ವಾಮೀಜಿಯವರನ್ನು ‘ನಡೆದಾಡುವ ದೇವರು’ ಎಂದೇ ಆರಾಧಿಸುತ್ತಾರೆ. ಅವರು ಭಾರತ ರತ್ನಕ್ಕೆ ಭಾಜನರಾಗುವುದನ್ನು ಜನ ಎದುರು ನೋಡುತ್ತಿದ್ದಾರೆ. ಕಾಯಕಯೋಗಿ ಆಗಿರುವ ಅವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪುರಸ್ಕಾರ ನೀಡಿ ಗೌರವಿಸಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.


‘111 ವರ್ಷದ ಶಿವಕುಮಾರ ಸ್ವಾಮೀಜಿ ಅವರು 8 ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಸಮಾಜದಲ್ಲಿನ ಕೆಟ್ಟ ಆಚರಣೆ, ಮೂಢನಂಬಿಕೆ ಮತ್ತು ತಾರತಮ್ಯ ತೊಲಗಿಸಲು ಶ್ರಮಿಸಿದ್ದಾರೆ. ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಸ್ವಾಮೀಜಿ ಅವರು ಮನುಕುಲಕ್ಕೆ ನೀಡಿದ ಸೇವೆಗೆ ಪ್ರತಿಯಾಗಿ ಮತ್ತು ಲಕ್ಷಾಂತರ ಭಕ್ತರ ನಿರೀಕ್ಷೆಯಂತೆ ‘ಭಾರತ ರತ್ನ’ವನ್ನು ಶಿವಕುಮಾರ ಸ್ವಾಮೀಜಿಗೆ ಪ್ರದಾನಿಸಬೇಕು. ಆ ಪುರಸ್ಕಾರಕ್ಕೆ ಅವರು ಅರ್ಹರಾಗಿದ್ದಾರೆ ಎಂದು ಎಸ್ .ಎಂ ಕೃಷ್ಣ ಅವರು ಪತ್ರದಲ್ಲಿ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ