ಸೋಮವಾರ ಬೆಳಗ್ಗೆ ದೂರವಾಣಿ ಮೂಲಕ ಮಾತನಾಡಿದ್ದ ರಾಜ್ಯಪಾಲರು, ಲೋಕಾಯುಕ್ತರ ಕಾರ್ಯವೈಖರಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದ್ದು, ಸಂಜೆ ಭೇಟಿಯಾಗುವಂತೆಯೂ ಸೂಚಿಸಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿಯೇ ನಿನ್ನೆ ಸಂಜೆ ತಮ್ಮ ಕಚೇರಿ ಕೆಲಸ ಪೂರೈಸಿದ ಲೋಕಾಯುಕ್ತರು, ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಾಲಾ ಅವರನ್ನು ಭೇಟಿಯಾಗಿದ್ದರು. ಅಲ್ಲಿ ಲೋಕಾಯುಕ್ತ ನ್ಯಾ. ಭಾಸ್ಕರ್ ರಾವ್ ಅವರಿಗೆ ರಾಜ್ಯಪಾಲರು ಕಡ್ಡಾಯ ರಜೆ ಮೇಲೆ ಒಂದು ತಿಂಗಳು ತೆರಳುವಂತೆ ಸೂಚನೆ ನೀಡಿದ್ದರು ಎಂದು ತಿಳಿದು ಬಂದಿತ್ತು.