ಮೂಕಪ್ರಾಣಿಯ ಮೇಲೆ ಕಾರು ಹತ್ತಿಸಿ ಪರಾರಿಯಾದ ಭೂಪ ಅಂದರ್

ಸೋಮವಾರ, 9 ಜನವರಿ 2023 (14:36 IST)
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.ಮೂಕಪ್ರಾಣಿಯ ಮೇಲೆ ಕಾರು ಹತ್ತಿಸಿ ಭೂಪ ಪರಾರಿಯಾಗಿದ್ದಾನೆ.ಮುತ್ತುರಾಯನಗರದ ಸಪ್ತಗಿರಿ ರೆಸಿಡೆನ್ಸಿ ಮುಂಭಾಗದ ರಸ್ತೆಯಲ್ಲಿ ಮಲಗಿದ್ದ ಶ್ವಾನದ ಮೇಲೆ ಕಾರು ಹತ್ತಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಜನವರಿ 7 ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕಾರು ಮೈಮೇಲೆ ಹತ್ತುತ್ತಿದ್ದಂತೆ ನಡು ರಸ್ತೆಯಲ್ಲೇ ಚಡಪಡಿಸಿದ ಶ್ವಾನ, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.KA 05 MP 5836 ಎಂಬ ನಂಬರಿನ ಕಾರು ಇದ್ದಾಗಿದ್ದು,ಸ್ಥಳೀಯರಿಂದ ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮುತ್ತುರಾಯನಗರದ ಸಪ್ತಗಿರಿ ರೆಸಿಡೆನ್ಸಿ ಮುಂಭಾಗದ ರಸ್ತೆಯಲ್ಲಿ ಶ್ವಾನ ಮಲಗಿತ್ತು.ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸ್ತಿದ್ದಾರೆ.
 
ಸ್ಥಳೀಯರಿಂದ ಮಾಹಿತಿ ಪಡೆದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.KA 05 MP 5836 ಎಂಬ ನಂಬರಿನ ಕಾರು  ಚಾಲಕನಿಗೆ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ಮಾಹಿತಿ ರವಾನೆಯಾಗಿದೆ.ಇಂದು ನಾಯಿಗೆ ಪೋಸ್ಟ್ ಮಾರ್ಟಂ ಸಹಾ ಮಾಡಲಾಗುತ್ತದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ