ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಈ ಮಹತ್ವದ ಬದಲಾವಣೆ ಖಚಿತ

Krishnaveni K

ಸೋಮವಾರ, 13 ಏಪ್ರಿಲ್ 2026 (09:06 IST)
ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತ ಎನ್ನುತ್ತಿದೆ ಇತ್ತೀಚೆಗಿನ ಕೆಲವು ವಿದ್ಯಮಾನಗಳು.

ದಾವಣಗೆರೆ ಮತ್ತು ಬಾಗಲಕೋಟೆಯ ಎರಡು ಕ್ಷೇತ್ರಗಳಿಗೆ ಮೊನ್ನೆಯಷ್ಟೇ ಉಪಚುನಾವಣೆ ನಡೆದಿದ್ದು ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಈ ಬಾರಿ ದಾವಣಗೆರೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿದ್ದರು. ಶ್ಯಾಮನೂರು ಶಿವಶಂಕರಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿರುವುದು ಮುಸ್ಲಿಮರ ಕೋಪಕ್ಕೆ ಕಾರಣವಾಗಿತ್ತು.

ಕೊನೆಯ ಕ್ಷಣದಲ್ಲಿ ಸಾದಿಕ್ ಪೈಲ್ವಾನ್ ಮನವೊಲಿಸಿ ನಾಮಪತ್ರ ಹಿಂಪಡೆದರೂ ಕಾಂಗ್ರೆಸ್ ನ ಅಲ್ಪ ಸಂಖ್ಯಾತ ನಾಯಕರು ಅದರಲ್ಲೂ ಪ್ರಮುಖವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೇ ಹೋಗಿರಲಿಲ್ಲ. ಇದು ಹೈಕಮಾಂಡ್ ಗಮನಕ್ಕೆ ಬಂದಿದೆ.

ಹೀಗಾಗಿ ಕಾಂಗ್ರೆಸ್ ನ ಅಲ್ಪಸಂಖ್ಯಾತ ನಾಯಕರಾದ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್, ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಚಿವ ಜಮೀರ್ ಅಹ್ಮದ್ ಗೆ ಸದ್ಯದಲ್ಲೇ ಎಐಸಿಸಿ ನೋಟಿಸ್ ನೀಡಲಿದೆ. ಒಂದು ವೇಳೆ ದಾವಣಗೆರೆಯಲ್ಲಿ ಸೋಲಾದರೆ ಜಮೀರ್ ಅಹ್ಮದ್ ಮಂತ್ರಿಗಿರಿಗೂ ಕುತ್ತು ಬಂದರೂ ಅಚ್ಚರಿಯಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ