ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷಕ್ಕೆ ರಾಜೀನಾಮೆ ನೀಡಿದ ಹಿರಿಯ ಶಾಸಕ ಕಾಳಿದಾಸ ಕೊಲಂಬಕರ್

ಬುಧವಾರ, 13 ಮಾರ್ಚ್ 2019 (12:50 IST)
ಮುಂಬೈ : ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲಿ ಕಾಂಗ್ರೆಸ್ ನ ಕೆಲವು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.


ನಿನ್ನೆಯಷ್ಟೇ ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಬಿಜೆಪಿ ಸೇರಿದ್ದರು. ಅದರ ಬೆನ್ನಲ್ಲೇ ರಾಧಾಕೃಷ್ಣ ವಿಖೆ ಅವರೂ ಪಕ್ಷಕ್ಕೆ ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬು ಸುದ್ದಿ ಹರಿದಾಡುತ್ತಿದೆ.


ಆದರೆ ಇದೀಗ 7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಕಾಳಿದಾಸ ಕೊಲಂಬಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈನ ವಡಾಲಾ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಳಿದಾಸ ಬಿಜೆಪಿ ಸೇರಿ ವಡಾಲ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ