ಉಪಚುನಾವಣೆಯ ಪ್ರಚಾರ ಕಾರ್ಯದಿಂದ ದೂರ ಉಳಿದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್

ಮಂಗಳವಾರ, 3 ಡಿಸೆಂಬರ್ 2019 (11:40 IST)
ಬೆಂಗಳೂರು : ಉಪಚುನಾವಣೆಯ ಪ್ರಚಾರ ಕಾರ್ಯದಿಂದ ದೂರ ಉಳಿದ ಕಾಂಗ್ರೆಸ್ ನಾಯಕರಿಗೆ ಇದೀಗ ಕೆಸಿ ವೇಣುಗೋಪಾಲ್ ಅವರು ಬಿಗ್ ಶಾಕ್ ನೀಡಿದ್ದಾರೆ. ಹೈಕಮಾಂಡ್ ಆದೇಶಿಸಿದ್ರೂ  ಕ್ಯಾರೇ ಎನ್ನದ ಕಾಂಗ್ರೆಸ್ ನಾಯಕರ ಪಟ್ಟಿ ಸಿದ್ದವಾಗುತ್ತಿದೆ ಎನ್ನಲಾಗಿದೆ.


 

ದೇವನಹಳ್ಳಿ ವಿಮಾನ ನಿಲ್ದಾಣದ ತಾಜ್ ಹೋಟೆಲ್ ನಲ್ಲಿ ನಿನ್ನೆ ರಾತ್ರಿ  ಕೆಸಿ ವೇಣುಗೋಪಾಲ್ ಸಭೆ ನಡೆಸಿ ಕೈ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಎಐಸಿಸಿ ವೀಕ್ಷಕರಿಂದ ಚುನಾವಣೆಯಲ್ಲಿ ಕೆಲಸ ಮಾಡದವರ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.


ಅಲ್ಲದೇ ಕೆಲಸ ಮಾಡದವರು ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತೆ.  ಹಾಗೂ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕಾರ್ಯಕರ್ತನಿಂದ ದೊಡ್ಡ ನಾಯಕನವರೆಗೆ ಯಾರೇ ತಪ್ಪು ಮಾಡಿದ್ರು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ