ತಾವರೆಕೆರೆ ಸಮೀಪದ ಚನ್ನೇನಹಳ್ಳಿ ಬಳಿ ಭಾನುವಾರ ರಾತ್ರಿ ಸುಮಾರು 7.50 ರ ಸುಮಾರಿಗೆ ಘಟನೆ ನಡೆದಿದ್ದು, ಸಾವನ್ನಪ್ಪಿದವರನ್ನು ಧನಂಜಯ್ ಮತ್ತು ಸಂಪತ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಂದ್ರು ಎಂಬಾತನ ದೇಹ 85% ಪ್ರತಿಶತ ಸುಟ್ಟು ಹೋಗಿದ್ದು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಧನಂಜಯ್ ಮತ್ತು ಚಂದ್ರು ಉತ್ತರ ಪ್ರದೇಶ ಮೂಲದವರಾಗಿದ್ದಾರೆ.
ಅಪಘಾತದಿಂದ ಪೆಟ್ರೋಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಕೆಳಗಡೆ ಸಿಕ್ಕಿ ಹಾಕಿಕೊಂಡಿದ್ದ ಕಾಲುಗಳನ್ನು ಹೊರಕ್ಕೆ ತೆಗೆಯುವಲ್ಲಿ ವಿಫಲರಾದ ಯುವಕರು ನೋಡ ನೋಡುತ್ತಿದ್ದಂತೆ ಬೆಂಕಿಯಲ್ಲಿ ಸುಟ್ಟು ಕರಕಲಾದರು . ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಚಂದ್ರುವನ್ನು ದಾರಿಹೋಕರು ಆಸ್ಪತ್ರೆಗೆ ಸೇರಿಸಿದ್ದಾರೆ.