ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಾ.ಜಿ.ಪರಮೇಶ್ವರ್ ಅಭಿಂನದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಾ ಬಂದಿದೆ. ಇದಕ್ಕೆ ಎಐಎಂಐಎಂ ಹಾಗೂ ಎಸ್ಡಿಪಿಐ ಪಕ್ಷಗಳು ಕೈ ಜೋಡಿಸಿವೆ ಎಂದು ಗಂಭೀರವಾಗಿ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ. ಆದರೆ, ಬಿಜೆಪಿ ಕೋಮು ಸೌಹಾರ್ದತೆಯನ್ನು ಕದಡುವ ಕೆಲಸ ಮಾಡುತ್ತಿದೆ. ಒಳ್ಳೆಯ ಕೆಲಸದ ಕುರಿತು ಮಾಧ್ಯಮಗಳು ಹೆಚ್ಚು ಪ್ರಚಾರ ಮಾಡಬೇಕು ಎಂದು ಅಭಿಪ್ರಾಯಪಟ್ಟರು.