ಕಾಂಗ್ರೆಸ್ ಪಕ್ಷದಿಂದ ನಮ್ಮ ಪಕ್ಷಕ್ಕೆ ಪಕ್ಷಾಂತರ ಮಾಡಿ ಸಚಿವರಾಗಿದ್ದ ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷದಿಂದ 10 ಬಾರಿ ಗೆದ್ದಿದ್ದರು ಅವರನ್ನು ಮಂತ್ರಿಯನ್ನಾಗಿ ಮಾಡುತ್ತಿರಲಿಲ್ಲ. ಅಂತಹ ವ್ಯಕ್ತಿಯನ್ನು ನಮ್ಮ ಪಕ್ಷ ಸಹಕಾರ ಸಚಿವರನ್ನಾಗಿ ಮಾಡಿತ್ತು. ತಮ್ಮ ರಾಜಕೀಯ ಏಳಿಗೆಗಾಗಿ ಸಹಕರಿಸಿದ ಪಕ್ಷದ ಬಗ್ಗೆ ಸೋಮಶೇಖರ್ ಕೃತಜ್ಞರಾಗಿರಬೇಕು ಆದರೆ ಅಂತಹ ದೊಡ್ಡ ಮನಸ್ಸು ಅವರಲ್ಲಿ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ.
ಶೋಭಾ ಅವರ ತಾಕತ್ತು ಹೇಳಿಕೆಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಸೋಮಶೇಖರ್ ಅವರು ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಎನ್ನುವುದಾದರೆ ಯಶವಂತಪುರ ಕ್ಷೇತ್ರಕ್ಕೆ ಬರಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅವಳು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧಿಸಲಿ ಆಗ ನನ್ನ ತಾಕತ್ತು ಏನೆಂದು ತೋರಿಸುತ್ತೇನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.