ಕಾಂಗ್ರೆಸ್, ಜೆಡಿಎಸ್ ನಡೆ ಕಾಯಲು ಬಿಜೆಪಿ ನಿರ್ಧಾರ

ಶುಕ್ರವಾರ, 28 ಆಗಸ್ಟ್ 2015 (19:51 IST)
ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ರೂಪಿಸುತ್ತಿರುವ ಮೈತ್ರಿ ತಂತ್ರವನ್ನು ಕಾದು ನೋಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 
ಮಾಜಿ ಸಚಿವರಾದ ಆರ್‌. ಅಶೋಕ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ಸೇರಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
 
ಬಿಬಿಎಂಪಿ ಚುಕ್ಕಾಣಿಗಾಗಿ ಬಿಜೆಪಿ ನಾಯಕರ ರಣತಂತ್ರ ರೂಪಿಸುತ್ತಿದ್ದು ಕಾಂಗ್ರೆಸ್, ಜೆಡಿಎಸ್ ನಡೆ ಕಾಯಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
 
ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ವೆಬ್ದುನಿಯಾವನ್ನು ಓದಿ