ಕೆ.ಆರ್ ಪೇಟೆ ಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವು

ಸೋಮವಾರ, 9 ಡಿಸೆಂಬರ್ 2019 (11:09 IST)
ಬೆಂಗಳೂರು : ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದರಲ್ಲಿ ಕೆ.ಆರ್ ಪೇಟೆ ಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.



ಬಿಜೆಪಿ ಅಭ್ಯರ್ಥಿಯಾದ ನಾರಾಯಣಗೌಡರು 34,598 ಮತಗಳನ್ನು ಹಾಗೂ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ಸಂತೋಷ್ 31,422 ಮತ ಪಡೆದಿದ್ದು, ಈ ಮೂಲಕ 3176 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾರಾಯಣಗೌಡರು ಗೆಲುವು ಸಾಧಿಸಿದ್ದಾರೆ.


ಈ ಹಿನ್ನಲೆಯಲ್ಲಿ ಇದೀಗ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡ ಸಿಎಂ ಪುತ್ರ ವಿಜಯೇಂದ್ರ ಅವರು ಇದೀಗ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ