ಬಿಜೆಪಿ ಕೋರ್ ಕಮಿಟಿ ಸಭೆ ಮುಕ್ತಾಯ: ಹಲವು ನಿರ್ಣಯ

ಭಾನುವಾರ, 6 ಸೆಪ್ಟಂಬರ್ 2015 (12:09 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಬಿಬಿಎಂಪಿ ಗದ್ದುಗೆ ಏರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮುಖಂಡರು ನಗರದ ಮಲ್ಲೇಶ್ವರಂ ನಲ್ಲಿರುವ ತಮ್ಮ ಪಕ್ಷದ ಮುಖ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸುತ್ತಿದ್ದಾರೆ.  
 
ಒಂದೂವರೆ ಗಂಟೆಯ ಕಾಲ ನಡೆದ ಈ ಸಭೆಯಲ್ಲಿ ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ವಿರುದ್ಧ ಕಾನೂನು ಸಮರ ನಡೆಸುವ ಹಾಗೂ ಪ್ರತಿಭಟನೆಯನ್ನು ಮುಂದುವರಿಸುವ ಮುಂದಿನ ಎಲ್ಲಾ ರಣತಂತ್ರಗಳ ಬಗ್ಗೆ ಹಾಗೂ ಮೈಸೂರು ರೈತ ಚೈತನ್ಯ ಯಾತ್ರೆ ಸಮಾರೋಪ ಸಮಾರಂಭವನ್ನು ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಲಾಗಿದ್ದು, ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ. 
 
ಸಭೆಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದಿದ್ದು, ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಷಿ, ಬಿಜೆಪಿಯ ವಿಧಾನಸಭಾ ನಾಯಕ ಜಗದೀಶ್ ಶೆಟ್ಟರ್ ಶಾಸಕ ಆರ್.ಅಶೋಕ್ ಹಾಗೂ ಬಿಬಿಎಂಪಿಯ ನೂತನ ಕಾರ್ಪೊರೇಟರ್‌ಗಳು ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ