ಬಿಜೆಪಿ ಪಕ್ಷ ಬಿಡುವವರು ಬಿಡಲಿ ಚಿಂತೆಯಿಲ್ಲ: ಬಿ.ಎಸ್.ಯಡಿಯೂರಪ್ಪ

ಭಾನುವಾರ, 21 ಜನವರಿ 2018 (13:52 IST)
ಬಿಜೆಪಿ ಪಕ್ಷ ತೊರೆಯುವವರು ತೊರೆಯಲಿ ಯಾವುದೇ ಚಿಂತೆಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ್ಯ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ಮಲೆ ಮಹಾದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಹಲವರು ಪಕ್ಷ ತೊರೆಯಲಿದ್ದಾರೆ ಎನ್ನುವ ವದಂತಿಗಳಿವೆ.ಕೆಲವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಹೊಗುವವರು ಹೋಗಲಿ ಯಾವುದೇ ಚಿಂತೆಯಿಲ್ಲ ಎಂದು ಕಿಡಿಕಾರಿದ್ದಾರೆ.
 
ಬಿಜೆಪಿ ಪಕ್ಷ ಪ್ರತಿಯೊಬ್ಬರಿಗೆ ಸೂಕ್ತ ಸ್ಥಾನಮಾನ ನೀಡಿದೆ. ಪಕ್ಷ ಸೂಕ್ತ ಸ್ಥಾನ ನೀಡಿದ್ದರೂ ಪಕ್ಷ ತೊರೆಯುತ್ತೇನೆ ಎನ್ನುವ ನಾಯಕರಿಗೆ ಬುದ್ದಿವಾದ ಹೇಳುವಷ್ಟು ಬುದ್ದಿವಂತ ನಾನಲ್ಲ ಎಂದು ಟಾಂಗ್ ನೀಡಿದ್ದಾರೆ.
 
ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಮಧ್ಯೆ ಎದುರಾಗಿರುವ ಭಿನ್ನಮತದ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಭಿನ್ನಮತ ಶಮನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ