ಬಿಜೆಪಿ ಸರ್ಕಾರಕ್ಕೆ ಕೊರೊನಾ ಕಾಟ

ಮಂಗಳವಾರ, 11 ಜನವರಿ 2022 (17:19 IST)
ಕೊರೋನಾ ಮೂರನೇ ಅಲೆಯ ಹರಡುವಿಕೆ ಈ ಹಿಂದಿನ ಎರಡು ಅಲೆಗಳಿಗಿಂತ ತೀವ್ರವಾಗಿದೆ. ಈ ಬಾರಿ ಅನೇಕ ಮಂದಿ ಗಣ್ಯರು, ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ.
 
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು.
ರಾಜ್ಯ ಸಚಿವ ಸಂಪುಟದ ಸಚಿವರುಗಳಾದ ಆರ್ ಅಶೋಕ್ ಮತ್ತು ಬಿ ಸಿ ನಾಗೇಶ್ ಅವರಿಗೆ ಕೊರೋನಾ ಪಾಸಿಟಿವ್ ಬಂದು ಗುಣಮುಖರಾಗುತ್ತಿದ್ದಾರೆ.
 
ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಮುಖ್ಯಮಂತ್ರಿಗಳೊಂದಿಗೆ ನೇರ ಸಂಪರ್ಕದಲ್ಲಿ ಸಚಿವರು, ಅಧಿಕಾರಿಗಳಿಗೆ ಕೊರೋನಾ ಆತಂಕ ಶುರುವಾಗಿದೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ