ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಹೆಸರು ಕೆಟ್ಟಿದೆ-ಎಂಬಿ ಪಾಟೀಲ್

ಗುರುವಾರ, 19 ಜನವರಿ 2023 (19:24 IST)
ಪ್ರಧಾನಿ ಮೋದಿ ರಾಜ್ಯ ಪ್ರವಾಸ ವಿಚಾರವಾಗಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದು,ಪ್ರಧಾನಿ ಮೋದಿ ರಾಜ್ಯಕ್ಕೆ ಪದೇ ಪದೇ ಬರ್ತಾರೆ ಅದು ಗೊತ್ತಿರುವ ವಿಚಾರ.ಚುನಾವಣೆ ಸಮಯದಲ್ಲಿ ಮೋದಿ ಪ್ರಚಾರಕ್ಕೆ ಬರ್ತಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಹೆಸರು ಕೆಟ್ಟಿದೆ.ಬಿಜೆಪಿ ಸರ್ಕಾರದ ಅಭಿವೃದ್ಧಿ ಶೂನ್ಯ.ಬಿಜೆಪಿಗೆ ಒಂದೇ ಆಸೆರೆ ಅದು ಮೋದಿ.ಅದಕ್ಕೆ ಮೋದಿ ರಾಜ್ಯಕ್ಕೆ ಬರ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
 
ಅಲ್ಲದೇ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದ್ದರಿಂದ ಮೋದಿ ರಾಜ್ಯಕ್ಕೆ ಬರುತ್ತಿರುವ ವಿಚಾರವಾಗಿಯೂ ಮಾತನಾಡಿದ್ದು,ಬಿಜೆಪಿಯಲ್ಲಿ ನಾಯಕತ್ವ ಇಲ್ಲ..ಅದಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಬರ್ತಿದ್ದಾರೆ.ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ನಾಯಕತ್ವ ಇದೆ.ಆದ್ರೆ ಬಿಜೆಪಿಯಲ್ಲಿ ನಾಯಕತ್ವ ಕೊತರೆತೆ ಇದೆ.ಹಿಂದೆ ಯಡಿಯೂರಪ್ಪ ಇದ್ರು.ಈಗ ಯಾರಿಲ್ಲ.ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ.ಬಿಜೆಪಿ ಆಡಳಿತದಿಂದ ಜನರು ಬೆಸತ್ತಿದ್ದಾರೆ.ಈ ಬಾರಿ ರಾಜ್ಯದಲ್ಲಿ ಪ್ರಧಾನಿ ಮೋದಿ ಮೋಡಿ ನಡೆಯುವುದಿಲ್ಲ ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ