ಬಿಜೆಪಿ ಸರ್ಕಾರ ಲೂಟಿ ಮಾಡಿರುವ ಹಣವನ್ನ ಜನರಿಗೆ ವಾಪಸ್ ಕೊಡ್ತೀವಿ : ರಾಹುಲ್ ಗಾಂಧಿ

ಮಂಗಳವಾರ, 2 ಮೇ 2023 (11:30 IST)
ಚಾಮರಾಜನಗರ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಎಷ್ಟು ಲೂಟಿ ಮಾಡಿದೆಯೋ ಅಷ್ಟನ್ನೂ ಜನರಿಗೆ ವಾಪಸ್ ಕೊಡ್ತೀವಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
 
ನಗರದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಪ್ರಕಾರ ಆಯ್ಕೆಯಾಗಿರುವ ಸರ್ಕಾರವಲ್ಲ. ಶಾಸಕರನ್ನು ಖರೀದಿಸಿ ಕದ್ದು ರಚನೆ ಮಾಡಿರುವ ಸರ್ಕಾರ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಬಳಿ 8 ಕೋಟಿ ಸಿಕ್ತು. ಪಿಎಸ್ಐ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ಹೀಗೆ ಹಗರಣಗಳ ಪಟ್ಟಿಯೇ ಇದೆ. ಆದರೆ ಕರ್ನಾಟಕಕ್ಕೆ ಬರುತ್ತಿರುವ ಮೋದಿ ಈ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ