ದೋಸ್ತಿ ಸರ್ಕಾರ ಉರುಳಿಸಲು ಬಿಜೆಪಿ ಹೈಕಮಾಂಡ್ ಸೂಚನೆ

ಭಾನುವಾರ, 2 ಜೂನ್ 2019 (11:37 IST)
ಕೋಲಾರ : ರಾಜ್ಯದಲ್ಲಿರುವ ದೋಸ್ತಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸುಭದ್ರವಾಗಿ ನಡೆಯುತ್ತಿದ್ದರೂ ಬಿಜೆಪಿ ಮಾತ್ರ ಸರ್ಕಾರವನ್ನು ಉರುಳಿಸುವ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ. ಜನರಿಗೆ ಬಿಜೆಪಿ ಬಗ್ಗೆ ತಪ್ಪು ಸಂದೇಶ ಹೋಗಬಾರದೆಂದು ನಾವು ಸರ್ಕಾರ ಬೀಳಿಸಲ್ಲ, ಅದಾಗಿಯೇ ಬೀಳುತ್ತದೆ ಎನ್ನುತ್ತಿದ್ದಾರೆ. ಆದರೆ ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಉರುಳಿಸುವುದಕ್ಕೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಅಲ್ಲಿನ ನಾಯಕರೇ ನನಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.


ಕಳೆದ 10 ತಿಂಗಳಿನಿಂದ ಸರ್ಕಾರ ಬೀಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಜನರ ದಿಕ್ಕನ್ನು ತಪ್ಪಿಸಲು ವೈತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ.ಸರ್ಕಾರವನ್ನು ಉರುಳಿಸಲು ಈ ಪ್ರಯತ್ನ ಇವತ್ತೂ ಮಾಡುತ್ತಿದ್ದಾರೆ, ಮುಂದೆಯೂಮಾಡುತ್ತಿರುತ್ತಾರೆ ಎಂದು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ