ಎಬಿವಿಪಿ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡ: ಸಿದ್ದರಾಮಯ್ಯ

ಶುಕ್ರವಾರ, 19 ಆಗಸ್ಟ್ 2016 (16:12 IST)
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಪ್ರತಿಭಟನೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ರಾಜಕಾರಣಕ್ಕಾಗಿ ಭಾರತೀಯ ಜನತಾ ಪಾರ್ಟಿ ರಾಜಕೀಯ ಮಾಡುತ್ತಿದೆ. ಎಬಿಪಿವಿ ಬಿಜೆಪಿ ಪಕ್ಷದ ಅಂಗಸಂಸ್ಥೆ ಎಂದು ಹೇಳಿದರು.
 
ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಕಾಶ್ಮೀರಿ ಪಂಡಿತರಿಗೆ ಭಾರತೀಯ ಸೇನೆಯಿಂದ ತೊಂದರೆಯಾಗುತ್ತಿದೆ. ಸೇನೆಯಿಂದ ಸ್ವಾತಂತ್ರ್ಯ ಬೇಕು ಎಂದು ಆಗ್ರಹಿಸಿ ಕೆಲವರು ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ್ದರು.
 
ದೇಶ ವಿರೋಧಿ ಘೋಷಣೆ ಕೂಗಿರುವುದನ್ನು ಖಂಡಿಸಿ ಕಳೆದ ಎರಡು ಮೂರು ದಿನಗಳಿಂದ ಎಬಿವಿಪಿ ಕಾರ್ಯಕರ್ತರು ಅಸಹಕಾರ ಚಳುವಳಿಯನ್ನು ಆರಂಭಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ