ಬಿಜೆಪಿಯವರು ಭ್ರಷ್ಟರು ಸಿದ್ದು ಕಿಡಿ

ಶುಕ್ರವಾರ, 26 ನವೆಂಬರ್ 2021 (15:32 IST)
ಬಿಜೆಪಿ ಭ್ರಷ್ಟಚಾರದ ಬಗ್ಗೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿತ್ತು. ಈ ಕುರಿತು ಇಂದು ರಾಜ ಭವನದಲ್ಲಿ ಮಾಜಿ ಸಿ ಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ.ಇಂತಹ ಭ್ರಷ್ಟ ಸರ್ಕಾರವನ್ನು ನಾವು ಎಂದೂ ಕಂಡಿಲ್ಲ ಎಂದು ಹೇಳಿದರು. ಅಧಿಕಾರದಲ್ಲಿರುವವರು ಗುತ್ತಿಗೆದಾರರದಿಂದ ಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ನರೇಂದ್ರ ಮೋದಿ ಅವರು ಈ ಹಿಂದೆ ಕರ್ನಾಟಕಕ್ಕೆ ಬಂದಿದ್ದಾಗ ನಮ್ಮದು ಕಮಿಷನ್ ಸರ್ಕಾರ ಎಂದು ಆರೋಪ ಮಾಡಿದ್ದರು. ಈಗ ನಡೆಯುತ್ತಿರುವುದೇನೆ ಎಂದು ಪ್ರಶ್ನಿಸಿದರು. ಇಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯು ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅಡಿಯಲ್ಲಿ ಬರುತ್ತದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ