ಬಿಜೆಪಿ ಕೋಮುವಾದವನ್ನು ಕೆರಳಿಸುತ್ತಿದೆ: ಕರಾವಳಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್‌

Sampriya

ಶುಕ್ರವಾರ, 30 ಮೇ 2025 (17:48 IST)
ಬೆಂಗಳೂರು: ಕರಾವಳಿ ಭಾಗದಲ್ಲಿ ಈಚೆಗೆ ನಡೆಯುತ್ತಿರುವ ಕೋಮುಗಲಭೆಗಳು ಈ ಪ್ರದೇಶಕ್ಕೆ ದೊಡ್ಡ ಹೊಡೆತವನ್ನು ನೀಡಿದೆ  ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದರು.

ಈ ಬೆಳವಣಿಗೆ ಅಲ್ಲಿನ ಪ್ರದೇಶಕ್ಕೆ ಹಾಗೂ ರಾಜ್ಯಕ್ಕೆ ಎರಡಕ್ಕೂ ದೊಡ್ಡ ಹೊಡೆತವನ್ನು ನೀಡುತ್ತದೆ ಎಂದರು.

ವಿಧಾನಸೌಧ ಮತ್ತು ಅರಮನೆ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಸಮಾಜದ ಎಲ್ಲ ವರ್ಗದವರ ರಕ್ಷಣೆಗೆ ಕ್ರಮಕೈಗೊಂಡಿದ್ದೇವೆ, ಅಧಿಕೃತ ವರದಿಯ ಜೊತೆಗೆ, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ವರದಿ ಸಲ್ಲಿಸಲು ಪಕ್ಷದ ತಂಡವನ್ನೂ ಕಳುಹಿಸಲಾಗಿದೆ, ಈ ಪ್ರದೇಶದಲ್ಲಿ ಶಾಂತಿ ನೆಲೆಸಬೇಕೆಂದು ನಾವು ಬಯಸುತ್ತೇವೆ ಎಂದರು.


ಮಂಗಳೂರಿನ ಅಡ್ಡೂರು ಕೊಳ್ತಮಜಲ್‌ನಲ್ಲಿ ಪಿಕಪ್ ಚಾಲಕನನ್ನು ಕಡಿದು ಕೊಲೆ ಮಾಡಲಾಗಿದೆ. "ಇದು ಕೇವಲ ಒಂದು ಅಥವಾ ಎರಡು ಸಾವುಗಳ ಬಗ್ಗೆ ಅಲ್ಲ; ಕೋಮು ಉದ್ವಿಗ್ನತೆಯು ಈ ಪ್ರದೇಶಕ್ಕೆ ದೊಡ್ಡ ಹೊಡೆತವಾಗಿದೆ. ಜನರು ಆತಂಕಕ್ಕೊಳಗಾಗಿದ್ದಾರೆ ಮತ್ತು ಉದ್ಯಮಗಳು ಈ ಪ್ರದೇಶದಲ್ಲಿ ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆತಂಕ ವ್ಯಕ್ತಪಡಿಸಿದರು.

ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಲು ನಾನು ಬಿಜೆಪಿ ಮತ್ತು ಇತರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು. ದಕ್ಷಿಣ ಕನ್ನಡದಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ನಂತರವೂ ಪರಿಸ್ಥಿತಿ ಅಸ್ಥಿರವಾಗಿರುವುದಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನಾವು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದೇವೆ, ಬಿಜೆಪಿ ಮತ್ತು ಇತರ ಸಂಘಟನೆಗಳು ಕೋಮುವಾದ ಕೆರಳಿಸಲು ಪ್ರಯತ್ನಿಸುತ್ತಿವೆ, ಅಂತಿಮವಾಗಿ ಅವರು ಪರಿಣಾಮ ಬೀರುತ್ತಾರೆ ಎಂಬುದನ್ನು ಈ ಭಾಗದ ಜನರು ಅರ್ಥಮಾಡಿಕೊಳ್ಳಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ