ಮಾಜಿ ಸಚಿವ, ಹಿರಿಯ ನಟ ಅಂಬರೀಶ್‌ಗೆ ಬಿಜೆಪಿ ಗಾಳ

ಮಂಗಳವಾರ, 7 ಮಾರ್ಚ್ 2017 (16:10 IST)
ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರೊಂದಿಗೆ ಬಿಜೆಪಿ ಸೇರ್ಪಡೆ ಕುರಿತಂತೆ ಬಿಜೆಪಿ ಮುಖಂಡ ಆರ್.ಅಶೋಕ್ ಸಮಾಲೋಚನೆ ನಡೆಸಿದ್ದಾರೆ.
 
ಜೆಪಿ ನಗರದಲ್ಲಿರುವ ಅಂಬರೀಶ್ ನಿವಾಸಕ್ಕೆ ಭೇಟಿ ನೀಡಿದ ಅಶೋಕ್, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಮನವಿ ಮಾಡಿದ್ದಾರೆ.
 
ಈ ಹಿಂದೆ ದುಬೈನಲ್ಲಿ ಅಂಬರೀಷ್ ಅವರೊಂದಿಗೆ ಮೊದಲ ಬಾರಿಗೆ ಮಾತುಕತೆ ನಡೆಸಿದ್ದ ಅಶೋಕ್, ಇದೀಗ ಎರಡನೇ ಸುತ್ತಿನ ಮಾತುಕತೆ ನಡೆಸಿ ಅಂಬರೀಶ್ ಮನವೊಲಿಸುವಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.
 
ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ, ಹಿರಿಯ ಕಾಂಗ್ರೆಸ್ಸಿಗ, ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಆರ್.ಅಶೋಕ್, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಅಧಿಕೃತ ಆಹ್ವಾನ ನೀಡಿದ್ದರು.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ