‘ಇದೇನು ಗಾಂಧಿ ಜಯಂತಿಯೋ? ಸೋನಿಯಾ, ರಾಹುಲ್ ಜಯಂತಿಯೋ?’

ಮಂಗಳವಾರ, 3 ಅಕ್ಟೋಬರ್ 2017 (11:55 IST)
ಬೆಂಗಳೂರು: ದೇಶಾದ್ಯಂತ ನಿನ್ನೆ ಗಾಂಧಿ ಜಯಂತಿ ಆಚರಿಸುತ್ತಿದ್ದರೆ, ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದು ಸೋನಿಯಾ ಗಾಂಧಿ ಜಯಂತಿಯೋ, ರಾಹುಲ್ ಗಾಂಧಿ ಜಯಂತಿಯೋ ಎಂದು ಅನುಮಾನ ಹುಟ್ಟಿಸುವಂತಿತ್ತು ಎಂದು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ವ್ಯಂಗ್ಯ ಮಾಡಿದ್ದಾರೆ.


ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಬಗ್ಗೆ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ರಾಜಕೀಯ ಬೆರೆಸಬಾರದಿತ್ತು. ಇದಕ್ಕೆ ಇದು ವೇದಿಕೆಯಾಗಿದ್ದು ದುರದೃಷ್ಟಕರ ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ