ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದೆ. ರೈತಪರ, ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.ಬರಗಾಲ ನಿರ್ವಹಣೆಯಲ್ಲೂ ಉತ್ತಮವಾಗಿ ಕೆಲಸ ಮಾಡಿದೆ. ವಿಪಕ್ಷಗಳು ಹೊಟ್ಟೆಕಿಚ್ಚಿನಿಂದ ಸರಕಾರ ಮೇಲೆ ಆರೋಪಗಳನ್ನು ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಗುಡುಗಿದ್ದಾರೆ.