ಎತ್ತಿನ ಹೊಳೆ ಯೋಜನೆ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಇ ವೇಳೆ ಕರಾವಳಿ ಭಾಗದ ಜನ ಪ್ರತಿನಿಧಿಗಳು ಹಾಜರಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆ ವಿಫಲವಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಎತ್ತಿನ ಹೊಳೆ ಯೋಜನೆ ಜಾರಿಗೆ ವಿಧಾನ ಮಂಡಲದಲ್ಲಿ ಒಪ್ಪಿಗೆ ಸಿಕ್ಕಿದೆ. ಹಾಗೂ ಕ್ಯಾಬಿನೆಟ್ನಲ್ಲೂ ಸಹ ಒಪ್ಪಿಗೆ ಸಿಕ್ಕಿದೆ. ಹೀಗಿರುವಾಗ ಯೋಜನೆ ನಿಲ್ಲಿಸಲು ಸಾಧ್ಯವೆ? ಎಂದು ಪ್ರಶ್ನಿಸಿದರು.