ವಿದ್ವತ್ ಭೇಟಿಯಾಗದೇ ಆಸ್ಪತ್ರೆಗೆ ಹೋಗಿ ಬಂದ ಬಿಜೆಪಿ ನಾಯಕರ ದಂಡು

ಶುಕ್ರವಾರ, 23 ಫೆಬ್ರವರಿ 2018 (16:19 IST)
ಬೆಂಗಳೂರು: ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ರನ್ನು ಭೇಟಿಯಾಗಲು ಹೋದ ಬಿಜೆಪಿ ನಾಯಕರು ವಿದ್ವತ್ ಭೇಟಿಯಾಗದೇ ವಾಪಸಾಗಿದ್ದಾರೆ.
 

ಜಗದೀಶ್ ಶೆಟ್ಟರ್, ಆರ್. ಅಶೋಕ್ ನೇತೃತ್ವದ ಬಿಜೆಪಿ ನಾಯಕರ ನಿಯೋಗಕ್ಕೆ ವಿದ್ವತ್ ಭೇಟಿಗೆ ಅವಕಾಶ ಸಿಗಲಿಲ್ಲ. ವಿದ್ವತ್ ಆರೋಗ್ಯ ದೃಷ್ಟಿಯಿಂದ ವೈದ್ಯರು ಬಿಜೆಪಿ ನಾಯಕರಿಗೆ ಭೇಟಿಗೆ ಅವಕಾಶ ಕೊಡಲಿಲ್ಲ.

ಈ ನಡುವೆ ವಿದ್ವತ್ ತಂದೆ ಮತ್ತು ಕುಟುಂಬದವರ ಸಮಾಲೋಚನೆ ನಡೆಸಿದ ಬಿಜೆಪಿ ನಾಯಕರು ಸಶಕ್ತ ಹೋರಾಟ ನಡೆಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ