ಅರವಿಂದ್ ಪಾಟೀಲ್ ಮುಂದಿನ ಬಿಜೆಪಿ ಅಭ್ಯರ್ಥಿ ಎಂದ ಸವದಿ ಹೇಳಿಕೆಗೆ ಬಿಜೆಪಿ ಮುಖಂಡರು ಆಕ್ರೋಶ

ಭಾನುವಾರ, 31 ಜನವರಿ 2021 (11:27 IST)
ಬೆಂಗಳೂರು : ಅರವಿಂದ್ ಪಾಟೀಲ್ ಮುಂದಿನ ಬಿಜೆಪಿ ಅಭ್ಯರ್ಥಿ ಎಂದ ಸವದಿ ಹೇಳಿಕೆಗೆ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಭೆ ನಡೆಸಿದ ಖಾನಾಪುರ ಬಿಜೆಪಿ ಮುಖಂಡರು ಸಭೆಯಲ್ಲಿ ಲಕ್ಷ್ಮಣ್ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರವಿಂದ್ ಪಾಟೀಲ್ ಬಿಜೆಪಿ ಅಭ್ಯರ್ಥಿ ಅಂತಾರೆ. ನಾವು ಕೈಗೆ ಬಳೆ ಹಾಕಿಕೊಂಡು ಕುಳಿತಿದ್ದೀವಾ? ಸವದಿ ತಾಲೂಕು ರಾಜಕಾರಣಕ್ಕೆ ಬರೋದು ಬೇಡ. ನಮ್ಮ ಕ್ಷೇತ್ರದಲ್ಲಿ ನಾವೇ ರಾಜರಿದ್ದಂತೆ. ಬಿಜೆಪಿ ಮುಖಂಡ ಪ್ರಮೋದ್ ಕೋಚರಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ