ಬಿಜೆಪಿ ನಾಯಕರು ವಿಕೃತ ಮನೋಭಾವ ಬಿಡಲಿ: ರಾಮಲಿಂಗಾ ರೆಡ್ಡಿ

ಭಾನುವಾರ, 7 ಜನವರಿ 2018 (12:37 IST)
ಬಿಜೆಪಿ ನಾಯಕರು ವಿಕೃತ ಮನೋಭಾವ ಬಿಡಬೇಕು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತ ಆಧಾರಗಳಿಲ್ಲದೇ ಯಾವುದೇ ಸಂಘಟನೆಯನ್ನು ನಿಷೇಧ ಮಾಡುವುದಕ್ಕಾಗುವುದಿಲ್ಲ. ವರದಿ ತರಿಸಿಕೊಂಡ ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ದೀಪಕ್ ರಾವ್ ಹತ್ಯೆಯಾಗಲಿ, ಬಶೀರ್ ಹತ್ಯೆಯಾಗಲಿ ತುಂಬಾ ನೋವು ತಂದಿದೆ. ಇಂತಹ ಹತ್ಯೆಗಳಿಗೆ ಕಡಿವಾಣ ಹಾಕಬೇಕಾಗಿದೆ. ಒಂದು ವೇಳೆ ಘಟನೆಯಲ್ಲಿ ಯಾವುದೇ ಸಂಘಟನೆ ಭಾಗಿಯಾಗಿರುವುದು ಕಂಡು ಬಂದಲ್ಲಿ ಅದನ್ನು ನಿಷೇಧಿಸಲಾಗುವುದು ಎಂದರು.
 
ಯಾರನ್ನೇ ಆದ್ರೂ ಕೊಲ್ಲುವುದು ಹೇಯ ಕೃತ್ಯ. ಬಶೀರ್ ಕುಟುಂಬದವರಿಗೆ ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚೆ ನಡೆಸಲಾಗಿದ್ದು 10 ಲಕ್ಷ ರೂ.ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ದಕ್ಷಿಣ ಕನ್ನಡ ಹೊರತುಪಡಿಸಿದರೆ ಬೇರೆ ಕಡೆ ಇಂತಹ ಘಟನೆಗಳು ನಡೆದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ