ಬಿಬಿಎಂಪಿ ಚುನಾವಣೆ ಉಸ್ತುವಾರಿ ಹೊಂದಿದ್ದ ಮಾಜಿ ಉಪಮುಖ್ಯಮಂತ್ರಿ ಆರ್|ಅಶೋಕ್, ಅನಂತ್ ಕುಮಾರ್, ಡಿವಿಎಸ್ ಸೇರಿದಂತೆ ಹಲವಾರು ಗಣ್ಯರು ಸೆಪ್ಟೆಂಬರ್ 3 ರಂದು ಸಭೆ ಸೇರಿ ಮೇಯರ್ ಮತ್ತು ಉಪಮೇಯರ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಮೇಯರ್ ಸ್ಥಾನಕ್ಕೆ ಐವರು ಕಾರ್ಪೊರೇಟರ್’ಗಳು ರೇಸ್ನಲ್ಲಿದ್ದಾರೆ. ಉಮೇಶ್ ಶೆಟ್ಟಿ, ಎಲ್. ಶ್ರೀನಿವಾಸ್, ಪದ್ಮನಾಭ ರೆಡ್ಡಿ, ಎಂ.ನಾಗರಾಜು, ಮಂಜುನಾಥ್ ರಾಜು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎನ್ನಲಾಗಿದೆ.