ಪರ್ಯಾಯ ಮಾರ್ಗದ ಮೂಲಕ ಮಂಗಳೂರಿಗೆ ತೆರಳಲು ಬಿಜೆಪಿ ಮುಖಂಡರ ಪ್ಲಾನ್..?

ಮಂಗಳವಾರ, 5 ಸೆಪ್ಟಂಬರ್ 2017 (14:04 IST)
ಮಂಗಳೂರು ಚಲೋ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಬೈಕ್ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಬೇರೆ ಮಾರ್ಗದ ಮೂಲಕ ಮಂಗಳೂರು ತಲುಪಿ ಮಂಗಳೂರು ಚಲೋ ನಡೆಸಲು ಬಿಜೆಪಿ ಮುಖಂಡರು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೌದು, ಬೈಕ್ ರ್ಯಾಲಿ ಬಿಟ್ಟು ಬಸ್, ರೈಲು, ವಿಮಾನ ಮಾರ್ಗದ ಮೂಲಕ ಮಂಗಳೂರಿಗೆ ತೆರಳಲು ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್`ಗಳನ್ನ ಮಾಡಿಕೊಂಡು ಹೊರಟರೆ ಅದಕ್ಕೂ ಪೊಲೀಸರು ತಡೆಯೊಡ್ಡುವ ಸಾಧ್ಯತೆ ಇರುವುದರಿಂದ ಸರ್ಕಾರಿ ಬಸ್, ರೈಲು ಮತ್ತು ವಿಮಾನದ ಮೂಲಕ ಮಂಗಳೂರಿಗೆ ತೆರಳಲು ನಿರ್ಧರಿಸಲಾಗಿದೆ ಎನ್ನಲಾಗಿದೆ.ೆ ಸಾರ್ವಜನಿಕ ಸಾರಿಗೆಯಲ್ಲಿ ಕಾರ್ಯಕರ್ತರನ್ನ ತಡೆದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಹೀಗಾಗಿ, ಪೊಲೀಸರು ಆ ಯತ್ನಕ್ಕೆ ಮುಂದಾಗುವುದಿಲ್ಲ ಎಂಬುದು ಬಿಜೆಪಿ ಪ್ಲಾನ್ ಎನ್ನಲಾಗುತ್ತಿದೆ.

ಈ ಮಧ್ಯೆ, ಬಿಜೆಪಿ ರ್ಯಾಲಿ ಬಗ್ಗೆ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ದೇವೇಗೌಡರು, ಯಾವ ಪುರುಷಾರ್ಥಕ್ಕಾಗಿ ಈ ರ್ಯಾಲಿ ಎಂದು ಪ್ರಶ್ನಿಸಿದ್ದಾರೆ. ಮತೀಯ ಸೂಕ್ಷ್ಮ ಪ್ರದೇಶವಾದ ಮಂಗಳೂರಿನಲ್ಲಿ ಶಾಂತಿ ಕಾಪಾಡಲೋ..? ಅಥವಾ ಯಾವ ಉದ್ದೇಶದಿಂದ ನಡೆಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.
.  
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ