ರೇವಣ್ಣನ ವಾಮಾಚಾರ ಮಾರ್ಗದಿಂದ ಸರ್ಕಾರ ಉಳಿಯಲ್ಲ ಎಂದ ಬಿಜೆಪಿ ಶಾಸಕ

ಶನಿವಾರ, 13 ಜುಲೈ 2019 (13:21 IST)
ಬೆಂಗಳೂರು : ಸರ್ಕಾರ ಉಳಿಸಿಕೊಳ್ಳಲು ಸಚಿವ ರೇವಣ್ಣನ ವಾಮಾಚಾರ ಮಾರ್ಗ ಸಫಲವಾಗುವುದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಒಟ್ಟಿಗಿದ್ದೇವೆ, ರಿವರ್ಸ್ ಆಪರೇಷನ್ ಭಯ ಇಲ್ಲ. ನಮಗೆಲ್ಲ ಸಂಸ್ಕೃತಿ, ಸಂಸ್ಕಾರ ಇದೆ. ಮುಖ್ಯಮಂತ್ರಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಸಿಎಂ ಕೀಳು ಮಟ್ಟದ ರಾಜಕಾರಣ ನಡೆಸುತ್ತಿದ್ದಾರೆ. ರಿವರ್ಸ್ ಆಪರೇಷನ್ ನಡೆಯಲ್ಲ ಎಂದು ಹೇಳಿದ್ದಾರೆ.


 

ಗೌರವದಿಂದ ಸಿಎಂ ಅವರು ರಾಜೀನಾಮೆ ನೀಡಿ ಹೋಗಬೇಕು. ನಿಂಬೆ ಹಣ್ಣು ರೇವಣ್ಣ ವಾಮಾಚಾರ ಮಾಡಿಸುತ್ತಿದ್ದು, ರೇವಣ್ಣ ಅವರ ವಾಮಾಚಾರ ಸಫಲ ಆಗುವುದಿಲ್ಲ. ರೇವಣ್ಣ ಅವರ ವಾಮಾಚಾರದಿಂದಲೇ ದೇವೇಗೌಡರು ಹಾಸನ ಬಿಟ್ಟು ಬರುವಂತಾಯಿತು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.


 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ