ಸಿದ್ದರಾಮಯ್ಯರನ್ನು ಹೊಗಳಿದ ಬಿಜೆಪಿ ಶಾಸಕ ಸುರೇಶಗೌಡ!

ಶನಿವಾರ, 30 ಡಿಸೆಂಬರ್ 2017 (14:46 IST)
ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರು ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
 
ಹೋರಾಟ, ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ಸಿದ್ದರಾಮಯ್ಯ ಶ್ರೇಷ್ಠ ಸ್ಥಾನಕ್ಕೆ ಹೋಗಿದ್ದಾರೆ. ಎಲ್ಲರೂ ಅವರಂತೆ ಸಾಧಕರಾಗಬೇಕು ಎಂದು ಹೇಳಿದ್ದಾರೆ.
 
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸವನ್ನು ರಾಜ್ಯದ ಎಲ್ಲಾ ಸಮುದಾಯದವರು ಒಪ್ಪುತ್ತಾರೆ ಎಂದು ಸಿದ್ದರಾಮಯ್ಯನವರನ್ನು ಹೊಗಳಿದ್ದಾರೆ.ಈ ವೀಡಿಯೋವನ್ನು ಕಾಂಗ್ರೆಸ್‌ನವರು ಶೇರ್‌ ಮಾಡಿ ಬಿಜೆಪಿಯವರಿಗೆ ಕಳುಹಿಸುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ