ಸಕ್ಕರೆ ಕಾಯಿಲೆ ಮತ್ತು ಬೊಜ್ಜು ಸಮಸ್ಯೆಯಿಂದ ದೂರ ಉಳಿಯಲು ನಿತ್ಯ ಸಂಸ್ಕೃತ ಮಾತನಾಡಿ ಎಂದ ಬಿಜೆಪಿ ಸಂಸದ

ಶುಕ್ರವಾರ, 13 ಡಿಸೆಂಬರ್ 2019 (11:24 IST)
ನವದೆಹಲಿ : ಸಕ್ಕರೆ ಕಾಯಿಲೆ ಮತ್ತು ಬೊಜ್ಜು ಸಮಸ್ಯೆಯಿಂದ ದೂರ ಉಳಿಯಲು ಪ್ರತಿನಿತ್ಯ ಸಂಸ್ಕೃತ ಮಾತನಾಡಿ ಎಂದು ಹೇಳುವುದರ ಮೂಲಕ ಬಿಜೆಪಿ ಸಂಸದರೊಬ್ಬರು ಟೀಕೆಗೆ ಗುರಿಯಾಗಿದ್ದಾರೆ.




ಬಿಜೆಪಿ ಸಂಸದ ಗಣೇಶ್ ಸಿಂಗ್ ಅವರು ಸಂಸ್ಕೃತಕ್ಕೆ ಸಂಬಂಧಿಸಿದ ಸಂವಾದದಲ್ಲಿ ಭಾಗವಹಿಸಿದ್ದು, ಈ ವೇಳೆ  ಮಾತನಾಡುವಾಗ ಈ ರೀತಿಯಾಗಿ ಹೇಳಿದ್ದು, ಅವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.


ನಿತ್ಯ ಸಂಸ್ಕೃತ ಮಾತನಾಡುವುದರಿಂದ ನರ ವ್ಯವಸ್ಥೆಗೆ ಹೊಸ ಚೈತನ್ಯ ಸಿಗುತ್ತದೆ. ಇದರಿಂದ ಸಕ್ಕರೆ ಕಾಯಿಲೆ ಮತ್ತು ಬೊಜ್ಜು ದೂರ ಉಳಿಯುತ್ತದೆ ಎಂಬುದು ಅಮೇರಿಕದವರು ನಡೆಸಿದ ಅಧ್ಯಯನದಿಂದ ಬಯಲಾಗಿದೆ. ಹೀಗೆ ಮಾಡುವುದರಿಂದ ನೀವು ಆರೋಗ್ಯವಾಗಿರಬಹುದು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ