ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ನಿರತವಾಗಿವೆ. ಎರಡೂ ಪಕ್ಷಗಳಿಗೆ ರಾಜ್ಯದ ಜನರ ಬಗ್ಗೆ ಕಾಳಜಿಯಿಲ್ಲ. ಕೇವಲ ರಾಜಕಾರಣ ಮಾಡುವುದು, ಲೂಟಿ ಹೊಡೆಯುವುದು ಪಕ್ಷಗಳ ಮುಖ್ಯ ಕಾಯಕವಾಗಿದೆ ಎಂದರು.
ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಮೇವಿನ ಕೊರತೆ ಎದುರಾಗಿದೆ. ಕಾವೇರಿ, ಮಹಾದಾಯಿ, ಎತ್ತಿನ ಹೊಳೆ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯದಲ್ಲಿರುವ ಸಮಸ್ಯೆಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತು ಬಿಜೆಪಿ ನೇರ ಹೊಣೆಯಾಗಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.