ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷ: ಆರ್.ಅಶೋಕ್

ಶುಕ್ರವಾರ, 4 ಆಗಸ್ಟ್ 2017 (16:06 IST)
ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷವಾಗಿದೆ. ಭ್ರಷ್ಟಾಚಾರವನ್ನು ಯಾವತ್ತೂ ಸಹಿಸೋಲ್ಲ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.
 
ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷವಾಗಿದ್ದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರದ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು ಎಂದು ತಿಳಿಸಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಬಿಜೆಪಿ ಕೈವಾಡವಿಲ್ಲ. ಅವರ ವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಳಿ ನಡೆದಿರಬಹುದು ಎಂದು ತಿಳಿಸಿದ್ದಾರೆ.
 
ಐಟಿ ದಾಳಿಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ