ಗಲಭೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ – ಸಿದ್ದರಾಮಯ್ಯಗೆ ಟಾಂಗ್

ಸೋಮವಾರ, 17 ಆಗಸ್ಟ್ 2020 (23:08 IST)
ರಾಜಧಾನಿಯಲ್ಲಿ ನಡೆದ ಗಲಭೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಭೇಟಿ ನೀಡಿದ್ದರು.


ಕಮಲ ಪಾಳೆಯದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಿಯೋಗವೊಂದು ಗಲಭೆ ಪೀಡಿತ ಸ್ಥಳಕ್ಕೆ ಭೇಟಿ ನೀಡಿತು.

ಹಾನಿಗೊಳಗಾದ ಪ್ರದೇಶ ಹಾಗೂ ಶಾಸಕರ ನಿವಾಸ ಕಂಡು ನೋವು ವ್ಯಕ್ತಪಡಿಸಿದರು.
ಇದೇ ವೇಳೆ, ಗಲಭೆಗೆ ಕಾರಣವಾದವರು ರಾಷ್ಟ್ರ ವಿರೋಧಿ ಕೆಲಸ ಮಾಡಿದ್ದಾರೆ ಅವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದರು.

ಇನ್ನು, ಅಹಿಂದ ಜಪ ಮಾಡುವ ಸಿದ್ದರಾಮಯ್ಯ ತಮ್ಮದೇ ಪಕ್ಷದ ಶಾಸಕರ ಕ್ಷೇತ್ರದಲ್ಲಿ ಗಲಭೆಯಾದರೂ ಯಾಕೆ ಭೇಟಿ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ