ರೈತರ ಮೇಲೆ ಹಲ್ಲೆಗೆ ಬಿಜೆಪಿ ತೀವ್ರ ಖಂಡನೆ: ಪ್ರತಿಭಟನೆ

ಶನಿವಾರ, 10 ಸೆಪ್ಟಂಬರ್ 2016 (13:06 IST)
ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿರುವುದನ್ನು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ ಎಸ್‌ಪಿ. ಕಚೇರಿಯ ಮುಂದೆ ಪ್ರತಿಭಟನೆ ಆರಂಭಿಸಿದೆ.
 
ರೈತರ ಮೇಲೆ ಲಾಠಿಚಾರ್ಜ್ ಮಾಡಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಕೂಡಲೇ ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ತೀವ್ರ ತೆರೆನಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದೆ.
 
 ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಿನ್ನೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಬಂದ್ ಸಂದರ್ಭದಲ್ಲಿ ಪ್ರತಿಭಟನಾಕಾರರು ಶಾಂತಿಯುತ ಹೋರಾಟ ನಡೆಸಿದ್ದರೂ ಕೆಆರ್‌ಎಸ್ ಡ್ಯಾಂ ಬಳಿ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನಾಕಾರರ ಆಕ್ರೋಶಕ್ಕೆ ಗುರಿಯಾಗಿದ್ದರು.  
 
ಪ್ರತಿಭಟನೆಯಲ್ಲಿ  ಬಿಜೆಪಿ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡು ಕಾವೇರಿ ನಮ್ಮದು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಲು ಬಿಡುವುದಿಲ್ಲ ಎನ್ನುವ ಘೋಷಣೆಗಳನ್ನು ಕೂಗಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ