ಸದನದಲ್ಲಿ ರಮಾನಾಥ್ ರೈ ವಿಚಾರಕ್ಕೆ ಗದ್ದಲ

ಸೋಮವಾರ, 19 ಜೂನ್ 2017 (12:17 IST)
ಬೆಂಗಳೂರು: ಕಲ್ಲಡ್ಕ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಹಿಂದೂ ಸಂಘಟನೆ ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಲು ಸಚಿವ ರಮಾನಾಥ್ ರೈ ಬಹಿರಂಗವಾಗಿಯೇ ಆದೇಶ ನೀಡಿದ್ದರು ಎನ್ನಲಾದ ವಿಡಿಯೋ ಇಂದಿನ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

 
ಬಹಿರಂಗ ಸಭೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪ್ರಭಾಕರ ಭಟ್ಟರನ್ನು ಬಂಧಿಸಲು ಆದೇಶ ನೀಡಲು ರಮಾನಾಥ ರೈ ಯಾರು? ಸಚಿವ ರೈ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ಗದ್ದಲವೇರ್ಪಟ್ಟಿತು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮುಂಬೈನಿಂದ ಕರೆ ಮಾಡಿ ಪ್ರಭಾಕರ ಭಟ್ಟರನ್ನು ಬಂಧಿಸಿದರೆ ನಿಮಗೆ ಮುಂದಿನ ಚುನಾವಣೆಯಲ್ಲಿ ಉಳಿಗಾಲವಿರಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ.

ಈ ವಿಚಾರವಾಗಿ ಸ್ಪೀಕರ್ ಕೋಳಿವಾಡ ಮಧ್ಯ ಪ್ರವೇಶಿಸಿ ಉಭಯ  ಪಕ್ಷದ ಸದಸ್ಯರನ್ನು ಸಮಾಧಾನಿಸಲು ಯತ್ನಿಸಿದರು. ಆದರೆ ಮತ್ತೆ ಸ್ವತಃ ಸಚಿವ ರೈ ಸ್ಪಷ್ಟನೆ ನೀಡಲು ಮುಂದಾದಾಗ ವಿಪಕ್ಷ ಸದಸ್ಯರು ಗದ್ದಲವೆಬ್ಬಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ