ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಆರಂಭ

ಶುಕ್ರವಾರ, 18 ಆಗಸ್ಟ್ 2017 (11:28 IST)
ಬೆಂಗಳೂರು: ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಂದು ಹೋದ ಮೇಲೆ ರಾಜ್ಯ ಬಿಜೆಪಿಗೆ ಚುರುಕು ಮುಟ್ಟಿದೆ. ಕಾಂಗ್ರೆಸ್ ನ ಭ್ರಷ್ಟ ಸಚಿವರನ್ನು ವಜಾಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿರುವ ಬಿಜೆಪಿ  ಪ್ರೀಡಂ ಪಾರ್ಕ್ ನಲ್ಲಿ ಒಟ್ಟುಸೇರಿದೆ.

 
ಪ್ರತಿಭಟನೆಯಲ್ಲಿ ಬಿಜೆಪಿಯ  ಶಾಸಕರು, ಕಾರ್ಪೋರೇಟರ್ ಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಘಟಟಾನುಘಟಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಇದಾದ ಬಳಿಕ ಫ್ರೀಡಂ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ.. ‘ಅತ್ಯಾಚಾರ ಪ್ರಕರಣ’ ವಿವಾದದಲ್ಲಿ ಸೃಜನ್ ಲೋಕೇಶ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ