ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

ಗುರುವಾರ, 22 ನವೆಂಬರ್ 2018 (20:42 IST)
ರಾಜ್ಯ ಸರ್ಕಾರ ರೈತರ ಬಗ್ಗೆ ಅಗೌರವ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿ  ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
 ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕತರು, ಹೃದಯ ಭಾಗ  ಪಚ್ಚಪ್ಪ ಸರ್ಕಲ್ ದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರು ಹಾಗೂ ಮಹಿಳೆಯರಿಗೆ  ಮನಬಂದಂತೆ  ಮಾತನಾಡಿ, ನಿಂದಿಸಿರುವ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಮ್ಮ ಮಗನಿಗೆ ಬುದ್ಧಿವಾದ  ಹೇಳಿ,  ಕಬ್ಬಿಗೆ ಸೂಕ್ತ ಬೆಲೆ ಕೊಡಿಸುವುದನ್ನ ಬಿಟ್ಟು  ಮಗನ ಹೇಳಿಕೆಯನ್ನ ಸಮರ್ಥಿಸಿಕೊಂಡಿರುವುದು  ಸರಿಯಲ್ಲ ಎಂದು ಹೇಳಿದರು.

ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಮುಖ್ಯಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು.  



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ