ದೇಯಿಬೈದೆತಿ ವಿಗ್ರಹಕ್ಕೆ ಅವಮಾನ ಪ್ರಕರಣ: ಬಿಜೆಪಿಯಿಂದ ಪಾದಯಾತ್ರೆ
ಮಂಗಳೂರು: ತುಳುನಾಡಿನ ಮಹಾಮಾತೆ ದೇಯಿಬೈದೆತಿ ವಿಗ್ರಹವನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ಬೃಹತ್ ಪಾದಯಾತ್ರೆಗೆ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.
ತುಳುನಾಡಿನ ವೀರ ಪುರುಷರಾದ "ಅಮರ್ ಬೊಳ್ಳಿಲು" ಕೋಟಿ ಚೆನ್ನಯ್ಯರಿಗೆ ಜನ್ಮ ನೀಡಿದ ಮಹಾಮಾತೆ ಅಪ್ಪೆ ದೇಯಿ ಬೈದೆತಿ ವಿಗ್ರಹಕ್ಕೆ ಅವಮಾನ ಮಾಡಲಾಗಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿತ್ತು. ಬ್ರಹತ್ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.